ಸ್ವಂತ ಮನೆ ಇಲ್ಲದವರಿಗೆ ಸಿದ್ದರಾಮಯ್ಯ ಸರ್ಕಾರದಿಂದ ಸಿಹಿ ಸುದ್ದಿ! ಉಚಿತ ಮನೆ ವಿತರಣೆ
ಸದ್ಯ ರಾಜ್ಯದಲ್ಲಿ ಬೇರೆ ಬೇರೆ ರೀತಿಯ ಗ್ಯಾರಂಟಿ ಯೋಜನೆ (guarantee schemes) ಗಳನ್ನು ಜಾರಿಗೆ ತಂದಿರುವ ರಾಜ್ಯ ಸರ್ಕಾರ, ಇದೀಗ ಬಡ ಹಾಗೂ ಮನೆ ಇಲ್ಲದವರಿಗೆ ಸ್ವಂತ ಮನೆ (own house) ಒದಗಿಸಲು ವಸತಿ ಯೋಜನೆಯನ್ನು ಕಾರ್ಯರೂಪಕ್ಕೆ ತಂದಿದೆ.
ಈ ಯೋಜನೆಯ ಮೂಲಕ ರಾಜ್ಯದಲ್ಲಿ ಸಾಕಷ್ಟು ನಿರ್ಗತಿಕರು ತಮ್ಮ ಸ್ವಂತ ಸೂರು ಪಡೆದುಕೊಳ್ಳಲು ಸಾಧ್ಯವಿದೆ.

ಗೃಹಲಕ್ಷ್ಮಿ ಹಣ ಇಂತಹ ಮಹಿಳೆಯರ ಖಾತೆಗೆ ಜಮಾ ಆಗುತ್ತಿಲ್ಲ! ಕಾರಣ ಹಾಗೂ ಪರಿಹಾರ ಇಲ್ಲಿದೆ
ಸ್ವಂತ ಮನೆ ಒದಗಿಸುವ ಭರವಸೆ ನೀಡಿದ ಸಿಎಂ ಸಿದ್ದರಾಮಯ್ಯ!
ರಾಜ್ಯದಲ್ಲಿ ಬಡವರ ಹಾಗೂ ನಿರ್ಗತಿಕರ ಹಿತ ದೃಷ್ಟಿಯಿಂದ ಸಿದ್ದರಾಮಯ್ಯ (CM Siddaramaiah) ಅವರು ರಾಜ್ಯ ಬಜೆಟ್ ನಲ್ಲಿ ಈ ವಿಚಾರದ ಬಗ್ಗೆ ಧ್ವನಿ ಎತ್ತಿದ್ದಾರೆ. ಸ್ವಂತ ಸೂರು ಎನ್ನುವುದು ಎಲ್ಲರ ಕನಸು ಆದರೆ ಬಡವರಿಗೆ ಇದು ಮರೀಚಿಕೆಯಾಗಿಯೇ ಉಳಿಯುತ್ತದೆ. ಆದರೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಸಾಕಷ್ಟು ಜನರ ಈ ಕನಸು ನನಸಾಗಲಿದೆ.
ರದ್ದಾದ ಬಿಪಿಎಲ್ ರೇಷನ್ ಕಾರ್ಡ್ ಮರು ವಿತರಣೆಗೆ ಸಿದ್ಧತೆ; ಇಲ್ಲಿದೆ ಮಹತ್ವದ ಮಾಹಿತಿ
ಯಾರಿಗೆ ಸಿಗಲಿದೆ ಉಚಿತ ಮನೆ?
ಸರ್ಕಾರ ರಾಜ್ಯದಲ್ಲಿ ವಾಸಿಸುತ್ತಿರುವ ಸ್ವಂತ ಮನೆ ರಹಿತ ಕುಟುಂಬಗಳಿಗೆ ಸ್ವಂತ ಸೂರು ನಿರ್ಮಾಣ ಮಾಡಿಕೊಳ್ಳುವುದಕ್ಕೆ ಸಾಲ ಸೌಲಭ್ಯ (loan facility) ಹಾಗೂ ಸಬ್ಸಿಡಿ (subsidy) ನೀಡಲು ಮುಂದಾಗಿದೆ. ಇದೇ ತಿಂಗಳ ಅಂತ್ಯದ ಒಳಗೆ ಅಂದರೆ ಫೆಬ್ರವರಿ 2024ರ ಒಳಗೆ ರಾಜ್ಯದಲ್ಲಿ ಒಟ್ಟು 36,000 ಮನೆಗಳ ವಿತರಣೆ ಆಗಲಿದೆ.
ಹೊಸ ರೇಷನ್ ಕಾರ್ಡ್ ವಿತರಣೆಗೆ ಡೇಟ್ ಫಿಕ್ಸ್; ಬಿಪಿಎಲ್ ಕಾರ್ಡ್ ವಿತರಣೆಗೆ ನಿರ್ಧಾರ
ರಾಜ್ಯ ವಸತಿ ಸಚಿವ ಜಮೀರ್ ಅಹಮದ್ ಖಾನ್, ಬಡವರಿಗೆ ಸ್ವಂತ ಮನೆ (Own House) ಒದಗಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ಇದೇ ಬರುವ ಫೆಬ್ರವರಿ 20 2024, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರಾಮೀಣ ಭಾಗದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಬಡವರಿಗೆ ಮನೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಹೀಗಾಗಿ ರಾಜ್ಯದಲ್ಲಿ ಸಾಕಷ್ಟು ಕುಟುಂಬಗಳು ಇನ್ನು ಮುಂದೆ ಬಾಡಿಗೆ ಮನೆಯಲ್ಲಿ ಅಥವಾ ಗುಡಿಸಿಲಿನಲ್ಲಿ ವಾಸ ಮಾಡುವ ಅಗತ್ಯವಿಲ್ಲ. ರಾಜ್ಯ ಸರ್ಕಾರದಿಂದ ನೀಡಲ್ಪಡುವ ಪಕ್ಕ ಮನೆಗಳಲ್ಲಿ ವಾಸಿಸಬಹುದು.
ಮುಂದಿನ ತಿಂಗಳ ಗೃಹಲಕ್ಷ್ಮಿ ಯೋಜನೆ ಹಣ ಬರಬೇಕು ಅಂದ್ರೆ ಈ ಕೆಲಸ ಮಾಡಲೇಬೇಕು!
Free house distribution to those who do not have own house by this Govt Scheme