Karnataka NewsBangalore News

ಗೃಹಲಕ್ಷ್ಮಿ ಯೋಜನೆಯ ಹೊಸ ಅಪ್ಡೇಟ್; ಇಂಥವರ ಖಾತೆಗೆ ಹಣ ಮಿಸ್ ಆಗೋದಿಲ್ಲ!

ಚುನಾವಣೆಗೂ ಮೊದಲು ಕೊಟ್ಟ ಭರವಸೆಯಂತೆ ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆ (Gruha lakshmi scheme) ಜಾರಿಗೆ ತಂದಿದ್ದು, ಈ ಮೂಲಕ ಗೃಹಿಣಿಯರಿಗೆ 2000 ಪ್ರತಿ ತಿಂಗಳು ಖಾತೆಗೆ (Bank Account) ಜಮಾ ಮಾಡಲಾಗುತ್ತಿದೆ.

ಕಳೆದ ಎಂಟು ತಿಂಗಳಿನಿಂದ ಮಹಿಳೆಯರು ತಲಾ ಎರಡು ಸಾವಿರ ರೂಪಾಯಿಗಳಂತೆ ಇಲ್ಲಿಯವರೆಗೆ 14 ರಿಂದ 16 ಸಾವಿರ ರೂಪಾಯಿಗಳನ್ನು ಪಡೆದುಕೊಳ್ಳಲು ಸಾಧ್ಯವಾಗಿದೆ.

Gruha Lakshmi Yojana funds have been released, Check the women of this district

ಆದ್ರೆ ಸಾಕಷ್ಟು ಮಹಿಳೆಯರಿಗೆ ಅರ್ಜಿ ಸಲ್ಲಿಸಿದ ನಂತರವೂ ಹಣ ಬಂದಿಲ್ಲ, ಇಂತಹ ಸಂದರ್ಭದಲ್ಲಿ ಈ ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ ಅಂತಹ ಮಹಿಳೆಯರ ಖಾತೆಗೆ ಹಣ ಹಾಕಲೇಬೇಕು ಎಂದು ಕಟ್ಟುನಿಟ್ಟಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ದಾಖಲೆಗಳು ಇದ್ರೆ ಮಾತ್ರ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಅವಕಾಶ! ಇಲ್ಲಿದೆ ಡೀಟೇಲ್ಸ್

ನಿಮ್ಮ ಖಾತೆಗೆ ಈ ಕಾರಣಕ್ಕೆ ಹಣ ಬಾರದು!

* ಆಧಾರ್ ಸೀಡಿಂಗ್ ಬಹಳ ಪ್ರಮುಖವಾದ ಕೆಲಸವಾಗಿದ್ದು ನೀವು ನಿಮ್ಮ ಬ್ಯಾಂಕ್ ಖಾತೆಗೆ (Bank Account) ಆಧಾರ್ ಸೀಡಿಂಗ್ (Aadhaar seeding) ಮಾಡಿಸಿಕೊಳ್ಳಬೇಕು.

* ಇನ್ನು ನಿಮ್ಮ ಖಾತೆಗೆ ಸಂಬಂಧಪಟ್ಟಂತೆ ಯಾವುದೇ ಸಮಸ್ಯೆ ಇದ್ದರೆ, ತಕ್ಷಣ ಬ್ಯಾಂಕ್ ಗೆ ಹೋಗಿ ಪರಿಶೀಲಿಸಿಕೊಳ್ಳಿ. ಸಿಬ್ಬಂದಿಗಳ ಬಳಿ ಮಾಹಿತಿ ಪಡೆದು, ಖಾತೆಯಲ್ಲಿ ಯಾವುದೇ ಅಪ್ಡೇಟ್ ಆಗದೆ ಇದ್ದರೆ ತಕ್ಷಣ ಮಾಡಿಕೊಳ್ಳಿ.

* ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗಿದ್ದರೂ, ನಿಮಗೆ ಎಸ್ಎಂಎಸ್ ಬಾರದೇ ಇರಬಹುದು ಅಂತಹ ಸಂದರ್ಭದಲ್ಲಿ ನೀವು ಬ್ಯಾಂಕಿಗೆ ಹೋಗಿ ನಿಮ್ಮ ಪಾಸ್ ಬುಕ್ ಎಂಟ್ರಿ ಮಾಡಿಸಿ ಆಗ ನಿಮ್ಮ ಖಾತೆಗೆ ಹಣ ಜಮಾ ಆಗಿರುವ ಬಗ್ಗೆ ಮಾಹಿತಿ ತಿಳಿಯಬಹುದು.

* ತಾಂತ್ರಿಕ ದೋಷಗಳು ಇದ್ದರೆ ಅವುಗಳನ್ನು ತಕ್ಷಣ ಪರಿಹರಿಸಿ ಹಣ ಜಮಾ ಮಾಡಲು ಸಚಿವೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆ ಹಣದ ಸ್ಟೇಟಸ್ ಚೆಕ್ ಮಾಡಲು ಹೊಸ ಡೈರೆಕ್ಟ್ ಲಿಂಕ್ ಇಲ್ಲಿದೆ

Gruha Lakshmi Yojanaಇವರ ಸಹಾಯ ಪಡೆಯಿರಿ ಎಂದ ಸಚಿವೆ

ನಿಮ್ಮ ಖಾತೆಗೆ ಹಣ ಬಾರದೆ ಇದ್ದರೆ ಅಂಗನವಾಡಿ ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ಎಲ್ಲಾ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿವೆ, ಈ ಹಿನ್ನೆಲೆಯಲ್ಲಿ ನೀವು ಅವರ ಸಹಾಯವನ್ನು ಪಡೆದು ನಿಮ್ಮ ಖಾತೆಗೆ ಹಣ ಬರುವಂತೆ ಮಾಡಿಕೊಳ್ಳಬಹುದು. ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi hebbalkar) ತಿಳಿಸಿದ್ದಾರೆ.

ಇಂತಹ ರೈತರ ಮಕ್ಕಳ ಖಾತೆಗೆ ಜಮಾ ಆಗುತ್ತದೆ 11,000 ರೂಪಾಯಿ, ತಕ್ಷಣ ಅಪ್ಲೈ ಮಾಡಿ

ಹಾಗಾಗಿ ಯಾವುದೇ ಮಹಿಳೆ ತಮ್ಮ ಖಾತೆಗೆ ಹಣ ಬಾರದೆ ಇದ್ದಾಗ ಅದರ ಬಗ್ಗೆ ಚಿಂತೆ ಮಾಡದೆ ಆಶಾ ಕಾರ್ಯಕರ್ತೆ ಅಥವಾ ಅಂಗನವಾಡಿ ಸಹಾಯಕಿಯರನ್ನು ಸಂಪರ್ಕಿಸಿ ಅವರಿಗೆ ತಮ್ಮ ಸಮಸ್ಯೆಗಳನ್ನು ತಿಳಿಸಿದರೆ ಪರಿಹಾರ ಪಡೆದುಕೊಳ್ಳಬಹುದು.

New Update of Gruha lakshmi Yojana, Money will not be missed for such people

Our Whatsapp Channel is Live Now 👇

Whatsapp Channel

Kannada News Today

Kannada News Today

Providing News, information & entertainment in Kannada Language, Since 2019. This Website reacts as a voice of the people & representative of a common man. as per Google it was first indexed in March 2019

Related Stories