ಇಂತಹ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ಸಿಗಲಿದೆ ವಿದ್ಯಾರ್ಥಿ ವೇತನ; ಅರ್ಜಿ ಸಲ್ಲಿಸಿ

ಮೆಟ್ರಿಕ್ ನಂತರದ ಕೋರ್ಸ್ (after matric course) ಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿ (students) ವಿದ್ಯಾರ್ಥಿನಿಯರು ಸರ್ಕಾರದಿಂದ ಶಿಷ್ಯವೇತನ ಪಡೆಯಬಹುದು. ಈ ಶಿಷ್ಯವೇತನ (Education scholarship) ಪಡೆದುಕೊಳ್ಳಲು ಅರ್ಜಿ ಸಲ್ಲಿಸುವುದಕ್ಕೆ ಜನವರಿ ತಿಂಗಳು ಕೊನೆಯ ದಿನಾಂಕವಾಗಿತ್ತು. ಆದರೆ ಈಗ ವಿದ್ಯಾರ್ಥಿಗಳ ಹಾಗೂ ಪೋಷಕರ ಬೇಡಿಕೆಯ ಮೇರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ಗೃಹಲಕ್ಷ್ಮಿ ಯೋಜನೆ ಮರು-ಪರಿಶೀಲನೆ! 26,000 ಮಹಿಳೆಯರಿಗೆ ಸಿಗೋದಿಲ್ಲ ಹಣ

ಯಾರಿಗೆ ಸಿಗಲಿದೆ ವಿದ್ಯಾರ್ಥಿ ವೇತನ? (Who can get government scholarship)

ಮೆಟ್ರಿಕ್ ನಂತರದ ವಿವಿಧ ಕೋರ್ಸ್ ಗಳಿಗೆ ಪ್ರವೇಶ ಪಡೆದಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು, ಪ್ರವರ್ಗ 1, ಅಲೆಮಾರಿ ಮತ್ತು ಅರೆ ಅಲೆಮಾರಿ ಕುಟುಂಬದ ವಿದ್ಯಾರ್ಥಿಗಳು ಸ್ಕಾಲರ್ಶಿಪ್ ಪಡೆದುಕೊಳ್ಳಲು ಅರ್ಹರು.

2023 24 ನೇ ಸಾಲಿನ ವಿದ್ಯಾರ್ಥಿ ವೇತನವನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ನೀಡುತ್ತಿದೆ. ವಿದ್ಯಾಸಿರಿ ಸ್ಕಾಲರ್ಶಿಪ್ (Vidya siri scholarship) ಮೂಲಕ ಮೆಟ್ರಿಕ್ ನಂತರದ ಶಿಕ್ಷಣಕ್ಕೆ ಅನುಕೂಲವಾಗಲು ಸಹಾಯಧನ ನೀಡಲಾಗುತ್ತದೆ.

ಜೊತೆಗೆ ಹಾಸ್ಟೆಲ್ ನಲ್ಲಿ ಉಳಿದುಕೊಳ್ಳಲು ಸಾಧ್ಯವಾಗದೆ ಇರುವ ವಿದ್ಯಾರ್ಥಿ ವಿದ್ಯಾರ್ಥಿಗಳಿಗೆ, ವಸತಿ ಹಾಗೂ ಊಟದ ಖರ್ಚಿಗೆ ಅಗತ್ಯ ಇರುವ ಹಣವನ್ನು ಸ್ಕಾಲರ್ಶಿಪ್ ಆಗಿ ನೀಡಲಾಗುವುದು.

ರೇಷನ್ ಕಾರ್ಡ್ ಇರೋರಿಗೆ ಇನ್ನಷ್ಟು ಬೆನಿಫಿಟ್! ನಾಳೆಯಿಂದ ಹೊಸ ಸೇವೆ ಆರಂಭ

ವಿದ್ಯಾರ್ಥಿ ವೇತನ ಪಡೆದುಕೊಳ್ಳಲು ಬೇಕಾಗಿರುವ ಅರ್ಹತೆಗಳು

ವಿದ್ಯಾರ್ಥಿಗಳು ಹಿಂದುಳಿದ ಸಮುದಾಯಕ್ಕೆ ಸೇರಿದವರಾಗಿರಬೇಕು.
11ನೇ ತರಗತಿ ಅಥವಾ ತತ್ಸಮಾನ ಕೋರ್ಸ್ ಗೆ ಸೇರಿರಬೇಕು.
ಹೆಣ್ಣು ಮಕ್ಕಳಿಗೆ 30% ನಷ್ಟು ರಿಯಾಯಿತಿ ಕೊಡಲಾಗುವುದು
ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ಮೀರಿರಬಾರದು.
ವಿದ್ಯಾರ್ಥಿ ಕರ್ನಾಟಕದ ಕಾಯಂ ನಿವಾಸಿ ಆಗಿರಬೇಕು ಕರ್ನಾಟಕದಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಠ 50% ನಷ್ಟು ಅಂಕ ಗಳಿಸಬೇಕು.

14 ಕೋಟಿ ರೈತರ ಖಾತೆಗೆ ಬರ ಪರಿಹಾರ ಹಣ ಜಮಾ; ನಿಮ್ಮ ಖಾತೆ ಚೆಕ್ ಮಾಡಿ!

Education Scholarshipಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲೆಗಳು (needed to documents)

ಜಾತಿ ಪ್ರಮಾಣ
ಪಾಲಕರ ಆದಾಯ ಪ್ರಮಾಣ
ಪಾಲಕರ ಮತ್ತು ವಿದ್ಯಾರ್ಥಿಯ ಆಧಾರ್ ಕಾರ್ಡ್
ರೇಷನ್ ಕಾರ್ಡ್
ಹಿಂದಿನ ವರ್ಷದ ಅಂಕಪಟ್ಟಿ
ಬಡ ವಿದ್ಯಾರ್ಥಿಗಳ ದೃಡೀಕರಣ ಪ್ರಮಾಣ ಪತ್ರ (ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಮಾತ್ರ)

ಗೃಹಲಕ್ಷ್ಮಿ ಯೋಜನೆಯ ಬಾಕಿ ಇರುವ ಪೆಂಡಿಂಗ್ ಹಣ ಪಡೆಯಲು ಈ ರೀತಿ ಮಾಡಿ!

ಅರ್ಜಿ ಸಲ್ಲಿಸುವುದು ಹೇಗೆ (how to apply)

ಸ್ಕಾಲರ್ಶಿಪ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸುವುದಕ್ಕೆ ವಿದ್ಯಾರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ ssp.karnataka.gov.in ಭೇಟಿ ನೀಡಿ. ಮೊದಲು ಲಾಗಿನ್ ಆಗಿ ನಿಮ್ಮ ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ, ಕ್ಯಾಪ್ಚ ನಂಬರ್ ಅನ್ನು ಹಾಕಿ. ಬಳಿಕ ಅಗತ್ಯ ಇರುವ ಮಾಹಿತಿಯನ್ನು ಭರ್ತಿ ಮಾಡಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬಹುದು..

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ; ( For more information contact ) ಡಿ.ದೇವರಾಜ ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ
ಆಯಾ ಹಿಂದುಳಿದ ತಾಲೂಕು ಕಚೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಿ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 15 2024. (Last date to apply 15th February 2024)

ಅನ್ನಭಾಗ್ಯ ಯೋಜನೆಗೆ ಹೊಸ ರೂಲ್ಸ್; ಇನ್ಮುಂದೆ ಹಣ ಪಡೆಯೋಕೆ ಈ ಕೆಲಸ ಕಡ್ಡಾಯ

Such students will get Education scholarship from the government

Kannada News Today

Kannada News Today Providing News, information & entertainment in Kannada Language, Since 2019. This Website reacts as a… More »

Related Stories