ನೋಟಿಸ್ ನೀಡಿ ತನಿಖೆಗೆ ಕರೆಯಲಿ : ಡಿಕೆ ಶಿವಕುಮಾರ್

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಜತೆಗಿರುವ ಫೋಟೋ ಕುರಿತು ಬಿಜೆಪಿ ನಾಯಕರು ಮಾತನಾಡುತ್ತಿದ್ದು, ತನಿಖಾಧಿಕಾರಿಗಳು ನನಗೆ ನೊಟೀಸ್ ನೀಡಿ ಕರೆದು, ತನಿಖೆ ಮಾಡಲಿ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಜತೆಗಿರುವ ಫೋಟೋ ಕುರಿತು ಬಿಜೆಪಿ ನಾಯಕರು ಮಾತನಾಡುತ್ತಿದ್ದು, ತನಿಖಾಧಿಕಾರಿಗಳು ನನಗೆ ನೊಟೀಸ್ ನೀಡಿ ಕರೆದು, ತನಿಖೆ ಮಾಡಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, `ನನ್ನನ್ನು ಬಹಳ ಮಂದಿ ಭೇಟಿ ಮಾಡುತ್ತಾರೆ. ಈ ಫೋಟೋ ಯಾವುದು ಎಂದು ನನಗೆ ಗೊತ್ತಿಲ್ಲ. ಈಗ ನಮ್ಮ ಸ್ನೇಹಿತರು ಈ ವಿಚಾರದ ಬಗ್ಗೆ ಹೇಳಿದ್ದಾರೆ.

ಪೊಲೀಸ್ ಅಧಿಕಾರಿಗಳು ಮೊದಲು ನನಗೆ ನೋಟೀಸ್ ಕೊಟ್ಟು ವಿಚಾರಣೆಗೆ ಕರೆಯಲಿ. ನಾನು ಮಂತ್ರಿಯಾಗಿ ಕೆಲಸ ಮಾಡಿದವನು. ಅವರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ನಿಯೋಗದೊಂದಿಗೆ ಬಂದಿದ್ದರು, ತಮ್ಮ ಸಮಸ್ಯೆ ಹೇಳಿಕೊಂಡು ಹೋದರು, ಅಷ್ಟೇ’ ಎಂದರು.

ನೋಟಿಸ್ ನೀಡಿ ತನಿಖೆಗೆ ಕರೆಯಲಿ : ಡಿಕೆ ಶಿವಕುಮಾರ್ - Kannada News

ಬಿಜೆಪಿ ಇದೇ ವಿಚಾರವನ್ನು ಮುಂದಿಟ್ಟುಕೊಂಡು ನಿಮ್ಮ ವಿರುದ್ಧ ಮಾತನಾಡುತ್ತಿದ್ದಾರೆ ಎಂಬ ಪ್ರಶ್ನೆಗೆ, `ಅವರು ನಮ್ಮ ಹೆಸರನ್ನು ಆಗಾಗ್ಗೆ ನೆನಪಿಸಿಕೊಳ್ಳುತ್ತಿರಬೇಕು. ನಮ್ಮ ಫೋಟೋ ಹಾಕಿಕೊಂಡು ಪ್ರಚಾರ ಮಾಡುತ್ತಿರಬೇಕು’ ಎಂದು ಡಿಕೆಶಿ ಛೇಡಿಸಿದರು.

Follow us On

FaceBook Google News

Advertisement

ನೋಟಿಸ್ ನೀಡಿ ತನಿಖೆಗೆ ಕರೆಯಲಿ : ಡಿಕೆ ಶಿವಕುಮಾರ್ - Kannada News

Read More News Today