ವರಮಹಾಲಕ್ಷ್ಮಿ ಹಬ್ಬಕ್ಕೆ ವಿಶ್ ಮಾಡಿದ ನಟ ದರ್ಶನ್, ಮಾಧ್ಯಮದವರ ಕ್ಷಮೆ ಕೇಳಿ ಪತ್ರ! ದರ್ಶನ್ ನಡೆಗೆ ಫ್ಯಾನ್ಸ್ ಮೆಚ್ಚುಗೆ!

ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ಮಾಧ್ಯಮದವರ ಬಳಿ ದರ್ಶನ್ ಕ್ಷಮೆಯಾಚಿಸಿರುವುದು ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿದೆ.

ಸ್ನೇಹಿತರೆ, ಕಳೆದ ಕೆಲ ತಿಂಗಳಿನಿಂದ ಸೋಶಿಯಲ್ ಮೀಡಿಯಾದಲ್ಲಿ (Social Media) ಸಕ್ಕತ್ ಆಕ್ಟಿವ್ ಆಗಿರುವಂತಹ ಚಾಲೆಂಜಿಂಗ್ ಸ್ಟಾರ್ ದರ್ಶನ್ (Kannada Actor Darshan) ಅವರು ಆಗಾಗ ತಮ್ಮ ಸೆಲೆಬ್ರಿಟಿಸ್ ಗಳಿಗಾಗಿ ವಿಶೇಷವಾದ ಪೋಸ್ಟ್ ಗಳನ್ನು ಹಂಚಿಕೊಳ್ಳುತ್ತ ಅಭಿಮಾನಿಗಳನ್ನು ಸಂತಸ ಪಡಿಸುತ್ತಿರುತ್ತಾರೆ.

ಹೀಗಿರುವಾಗ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಸೋಶಿಯಲ್ ಮೀಡಿಯಾದಲ್ಲಿ ಮಾಧ್ಯಮದವರ (Media) ಬಳಿ ದರ್ಶನ್ ಕ್ಷಮೆಯಾಚಿಸಿರುವುದು ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗಿದೆ.

ಹೌದು ಗೆಳೆಯರೇ ನೆನ್ನೆ ಅಷ್ಟೇ ಬರೋಬ್ಬರಿ 20 ವರ್ಷಗಳ ಬಳಿಕ ಮುನಿಸನ್ನು ಮರೆತು ಜೋಗಿ ಪ್ರೇಮ್ ಅವರೊಂದಿಗೆ ಕೆಲಸ ಮಾಡಲು ಒಪ್ಪಿಗೆ ಸೂಚಿಸಿರುವ ಸಿಹಿ ಸುದ್ದಿ ಒಂದನ್ನು ಹಂಚಿಕೊಂಡಿದ್ದ ದರ್ಶನ್ ಅವರು ಇಂದು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ (Actor Darshan Wishes to Varamahalakshmi festival) “ಸಮಸ್ತ ಕರ್ನಾಟಕ ಜನತೆಗೆ ಹಾಗೂ ನನ್ನ ಸೆಲೆಬ್ರಿಟಿಸ್ಗಳಿಗೆ, ಹಿರಿಯ ಪತ್ರಕರ್ತರಿಗೆ, ಮಾಧ್ಯಮದವರಿಗೆ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು.

ವರಮಹಾಲಕ್ಷ್ಮಿ ಹಬ್ಬಕ್ಕೆ ವಿಶ್ ಮಾಡಿದ ನಟ ದರ್ಶನ್, ಮಾಧ್ಯಮದವರ ಕ್ಷಮೆ ಕೇಳಿ ಪತ್ರ! ದರ್ಶನ್ ನಡೆಗೆ ಫ್ಯಾನ್ಸ್ ಮೆಚ್ಚುಗೆ! - Kannada News

ಕನ್ನಡಿಗರ ವಿಷಯದಲ್ಲಿ ರಶ್ಮಿಕಾ ಮಂದಣ್ಣ ಮತ್ತೊಂದು ಎಡವಟ್ಟು! ಬೇಕಂತಲೇ ಕನ್ನಡ ಕಡೆಗಣಿಸುವ ನ್ಯಾಷನಲ್ ಕ್ರಶ್

ಕಳೆದು ಸುಮಾರು ವರ್ಷದಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂಟಕ ಉಂಟಾಗಿತ್ತು, ಈ ವರಮಹಾಲಕ್ಷ್ಮಿ ಹಬ್ಬದ ಮುನ್ನ ದಿನ ಮಿತ್ರ ರಾಕ್ ಲೈನ್ ವೆಂಕಟೇಶ್ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯಗೊಂಡಿದೆ.

ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದ್ದೇಶ ಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಗಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿದ್ದು, ಅದು ಮಾಧ್ಯಮದ ಇತರ ವ್ಯಕ್ತಿಗಳ ಕುರಿತು ಆಡಿದ ಮಾತಾಗಿರಲಿಲ್ಲ.

ಆ ವ್ಯಕ್ತಿ ಯಾವ ದುರುದ್ದೇಶದಿಂದ ಮಾಡಿದರೊ ಗೊತ್ತಿಲ್ಲ. ಆದರೂ ಆ ವ್ಯಕ್ತಿಗೆ ಒಳ್ಳೆಯದಾಗಲಿ ಮುಂದೆ ಆ ವ್ಯಕ್ತಿ ಈ ರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ.

Challenging Star Darshanಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದವರಿಗೆ ಕ್ಷಮೆ ಇರಲಿ. ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ಪಾಲು ಸಾಕಷ್ಟಿದೆ.

ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ, ಕನ್ನಡ (Kannada), ಕನ್ನಡಿಗರು, ಕನ್ನಡ ನೆಲ ಜಲ, ಕನ್ನಡ ಚಿತ್ರರಂಗದ ಪ್ರಗತಿಗೆ ಜೊತೆಯಾಗಿ ಕೆಲಸ ಮಾಡೋಣ ಪ್ರೀತಿ ಇರಲಿ, ನನ್ನ ಪ್ರೀತಿಯ ಸೆಲೆಬ್ರಿಟಿಗಳು ನನ್ನ ಭಾವನೆಯನ್ನು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ.

ಪ್ರೀತಿಯಿಂದ ದರ್ಶನ್ ತೂಗುದೀಪ!” ಎಂಬ ಪೋಸ್ಟ್ ಒಂದನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ದರ್ಶನ್ ಅವರು ಹಂಚಿಕೊಂಡಿದ್ದು, ನಡೆದಿದ್ದನ್ನು ಮರೆತು, ತಪ್ಪಿದ್ದರೆ ಕ್ಷಮೆ ಯಾಚಿಸಿ ಮುಂದೆ ಸಾಗಬೇಕೆಂಬ ದರ್ಶನ್ ಅವರ ನಡೆಗೆ ಅಭಿಮಾನಿಗಳ (Darshan Fans) ವತಿಯಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Kannada Actor Darshan Wishes to Varamahalakshmi festival and Says Sorry To Media

 

Follow us On

FaceBook Google News

Kannada Actor Darshan Wishes to Varamahalakshmi festival and Says Sorry To Media